Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:2 - ಕನ್ನಡ ಸತ್ಯವೇದವು C.L. Bible (BSI)

2 ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಬುರ್ಸ್ಯಾಪಾನಾತ್ನಾ ಅನಿ ವಾಯ್ಟ್ ಮಾನ್ಸಾನಿತ್ನಾ ಅಮ್ಕಾ ಬಚಾವ್ ಕರ್ ಮನುನ್ ಅಮ್ಚ್ಯಾಸಾಟ್ನಿ ಮಾಗ್ನಿ ಕರಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳಿ ಲೊಕಾ ಬರಿ ಖಬರ್ ಮಾನುನ್ ಘೆಯ್‍ನಾತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:2
18 ತಿಳಿವುಗಳ ಹೋಲಿಕೆ  

ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.


ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.


ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.


ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು