Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಆಕಾಂಕ್ಷೆಯಾಗಿ ಇದ್ದುದರಿಂದಲೂ ಘನವನ್ನೂ, ಧನವನ್ನೂ, ಐಶ್ವರ್ಯವನ್ನೂ, ನಿನ್ನ ವೈರಿಗಳ ಪ್ರಾಣವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳದೆ, ನಾನು ಯಾರನ್ನು ಮುನ್ನಡೆಸಲು ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನ, ವಿವೇಕಗಳನ್ನು ನೀನು ಕೇಳಿಕೊಂಡದ್ದರಿಂದಲೂ ಜ್ಞಾನವೂ, ವಿವೇಕವೂ ನಿನಗೆ ಕೊಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ದೇವರು ಸೊಲೊಮೋನನಿಗೆ - ನೀನು ಘನಧನೈಶ್ವರ್ಯಗಳನ್ನಾಗಲಿ ವೈರಿಗಳ ಪ್ರಾಣಹರಣವನ್ನಾಗಲಿ ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳದೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವದಕ್ಕೋಸ್ಕರ ಜ್ಞಾನವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ಬೇಡಿಕೊಂಡದರಿಂದ ಅವು ನಿನಗೆ ದೊರಕುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:11
15 ತಿಳಿವುಗಳ ಹೋಲಿಕೆ  

ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.


‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸುಮಾಡಿದ್ದು ಒಳ್ಳೆಯದೇ ಸರಿ.


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.


ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು