Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:11 - ಕನ್ನಡ ಸತ್ಯವೇದವು C.L. Bible (BSI)

11 ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು", ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು ಎಂಬದಾಗಿ ಹೇಳಬೇಕು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:11
14 ತಿಳಿವುಗಳ ಹೋಲಿಕೆ  

ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು.


ಅಲ್ಲದೆ, ಅವರನ್ನು ಕೊಲ್ಲದೆಯೇ ಐದು ತಿಂಗಳಕಾಲ ಬಾಧಿಸಬೇಕೆಂದು ಆಜ್ಞಾಪಿಸಲಾಗಿತ್ತು. ಆ ಬಾಧೆ, ಚೇಳು ಕುಟುಕಿದರೆ ಉಂಟಾಗುವ ಬಾಧೆಯಂಥದ್ದು.


ಆ ಹೊಗೆಯೊಳಗಿಂದ ಮಿಡತೆಗಳು ಹೊರಟು ಭೂಮಿಗೆ ಬಂದವು. ಭೂಮಿಯಲ್ಲಿ ಇರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಗಿತ್ತು.


ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


“ನಾನು ಹೇಳುವುದನ್ನು ಕೇಳಿ : ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.


ನಡೆಯಿರಿ ಕೆಲಸಕ್ಕೆ; ನಿಮಗೆ ಹುಲ್ಲು ಕೊಡುವುದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಲೇಬೇಕು,” ಎಂದನು.


ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬುದಾಗಿ ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪ;


ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು