Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:13 - ಕನ್ನಡ ಸತ್ಯವೇದವು C.L. Bible (BSI)

13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ರೆಹಬ್ಬಾಮನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನು ಅವರಿಗೆ ಕಠಿನವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಅರಸನಾದ ರೆಹಬ್ಬಾಮನು ಹಿರಿಯರ ಸಲಹೆಯನ್ನು ತಿರಸ್ಕರಿಸಿ ಜನರೊಂದಿಗೆ ಬಹಳ ಕೀಳಾಗಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:13
11 ತಿಳಿವುಗಳ ಹೋಲಿಕೆ  

ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.


ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.


“ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ.


ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.


ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.


ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.


ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು