Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:6 - ಕನ್ನಡ ಸತ್ಯವೇದವು C.L. Bible (BSI)

6 ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರಕೊಡಬೇಕು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:6
11 ತಿಳಿವುಗಳ ಹೋಲಿಕೆ  

ದೊಡ್ಡವರು ಮಾತಾಡಲಿ ಎಂದುಕೊಂಡೆನು ವಯೋವೃದ್ಧರು ಸುಜ್ಞಾನವನು ಬೋಧಿಸಲಿ ಎಂದೆನು.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.


ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.


“ನೀವು ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು; ಜನರು ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು