Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:10 - ಕನ್ನಡ ಸತ್ಯವೇದವು C.L. Bible (BSI)

10 ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚೊರ್ಗ, ಅಯ್ಯಾಲೋನ್, ಹೆಬ್ರೋನ್. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಜೇಕ, ಚೊರ್ಗ, ಅಯ್ಯಾಲೋನ್, ಹೆಬ್ರೋನ್ ಇವೇ. ಕೋಟೆಕೊತ್ತಲುಗಳುಳ್ಳ ಈ ಪಟ್ಟಣಗಳು ಯೆಹೂದ ಬೆನ್ಯಾಮೀನ್ ಪ್ರಾಂತದವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:10
14 ತಿಳಿವುಗಳ ಹೋಲಿಕೆ  

ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಇಳಿಜಾರು ಪ್ರದೇಶದಲ್ಲಿ


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.


ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.


ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.


ಮಾರೇಷ, ಜೀಫ್, ಅದೋರೈಮ್, ಲಾಕೀಷ್,


ಅವನುಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.


ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.


ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು