Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:23 - ಕನ್ನಡ ಸತ್ಯವೇದವು C.L. Bible (BSI)

23 ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ, ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿರಿಸಿ, ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ, ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿಟ್ಟು ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:23
8 ತಿಳಿವುಗಳ ಹೋಲಿಕೆ  

“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.


ಇವರ ತಂದೆ ಇವರಿಗೆ ಜುದೇಯದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಲ್ಲದೆ, ಬೆಳ್ಳಿಬಂಗಾರ, ಅಮೂಲ್ಯ ವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.


ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:


ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ನೇಮಿಸಿದನು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು