Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:4 - ಕನ್ನಡ ಸತ್ಯವೇದವು C.L. Bible (BSI)

4 ‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ, ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು. ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:4
16 ತಿಳಿವುಗಳ ಹೋಲಿಕೆ  

ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.


“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.


ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.


ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.


“ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಯೇಲರೆಲ್ಲರಿಗೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು