Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:15 - ಕನ್ನಡ ಸತ್ಯವೇದವು C.L. Bible (BSI)

15 ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಕನಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರವಾದಿಯಾದ ಶೆಮಾಯ ಮತ್ತು ದರ್ಶಿಯಾದ ಇದ್ದೋ ಬರೆದ ಚರಿತ್ರೆಗಳ ವಂಶಾವಳಿಗಳಲ್ಲಿ ರೆಹಬ್ಬಾಮನು ತಾನು ರಾಜನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಎಲ್ಲಾ ವಿಷಯಗಳು ಬರೆಯಲ್ಪಟ್ಟಿವೆ. ಅವನ ಆಳ್ವಿಕೆಯ ಕಾಲದಲ್ಲೆಲ್ಲಾ ಅವನಿಗೂ ಯಾರೊಬ್ಬಾಮನಿಗೂ ಯುದ್ಧಗಳು ನಡೆಯುತ್ತಲೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:15
13 ತಿಳಿವುಗಳ ಹೋಲಿಕೆ  

ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿ ನಾತಾನನ ಚರಿತ್ರೆ ಶೀಲೋವಿನವನಾದ ಅಹೀಯನ ಪ್ರವಾದನೆ ಹಾಗೂ ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿಡಲಾಗಿ ಇದೆ.


ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.


ಅಬೀಯನ ಉಳಿದ ಚರಿತ್ರೆ ಹಾಗೂ ನಡೆನುಡಿಗಳು ಪ್ರವಾದಿ ಇದ್ದೋವಿನ ವ್ಯಾಖ್ಯಾನದಲ್ಲಿ ಲಿಖಿತವಾಗಿವೆ.


ಆಗ ದೈವಪುರುಷನಾದ ಶೆಮಾಯನಿಗೆ ಈ ದೈವವಾಣಿ ಕೇಳಿಸಿತು.


ಆಗ ದೈವಪುರುಷನಾದ ಶೆಮಾಯನಿಗೆ ಸರ್ವೇಶ್ವರನ ಈ ವಾಣಿ ಕೇಳಿಸಿತು:


ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು


ಅರಸ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಜುದೇಯದ ಅರಸನಾಗಿ


ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.


ಆಸನ ಪೂರ್ವೋತ್ತರ ಚತರಿತ್ರೆಯನ್ನು ಯೆಹೂದ ಮತ್ತು ಇಸ್ರಯೇಲ್ ರಾಜರ ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.


ಅಹಾಜನ ಉಳಿದ ಪೂರ್ವೋತ್ತರ ಚರಿತ್ರೆ ಹಾಗು ಅವನ ಎಲ್ಲ ಪ್ರವರ್ತನೆಗಳು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಲಿಖಿತವಾಗಿವೆ.


ಅವನ ಪೂರ್ವೋತ್ತರ ವೃತ್ತಾಂತ ಇವು, ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು