Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:12 - ಕನ್ನಡ ಸತ್ಯವೇದವು C.L. Bible (BSI)

12 ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿದ್ದಾನೆ; ನಿಮಗೆ ವಿರುದ್ಧವಾಗಿ ಅರ್ಭಟದಿಂದ ಊದತಕ್ಕ ತುತ್ತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿದ್ದಾರೆ. ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಜಯಿಸಲಾರಿರಿ” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರು ನಮ್ಮೊಂದಿಗಿದ್ದಾನೆ. ನಮ್ಮನ್ನು ಆಳುವವನು ಆತನೇ. ಅವನ ಯಾಜಕರು ನಮ್ಮೊಂದಿಗಿದ್ದಾರೆ. ದೇವರ ಯಾಜಕರು ತುತ್ತೂರಿಯನ್ನೂದಿ ನಿಮ್ಮನ್ನು ಆತನ ಬಳಿಗೆ ಬರಲು ಎಚ್ಚರಿಸುತ್ತಾರೆ. ಇಸ್ರೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಜನರೊಂದಿಗೆ ಕಾದಾಡಬೇಡಿರಿ. ನೀವು ಜಯಹೊಂದುವದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:12
27 ತಿಳಿವುಗಳ ಹೋಲಿಕೆ  

ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು . ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ , ಬಹುಜನರ ಅಗತ್ಯವಿಲ್ಲ


ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ.


ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.


ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು


ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು