Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:1 - ಕನ್ನಡ ಸತ್ಯವೇದವು C.L. Bible (BSI)

1 ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:1
10 ತಿಳಿವುಗಳ ಹೋಲಿಕೆ  

ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ರೆಹಬ್ಬಾಮನು ಅರಸನಾದನು.


ಸೊಲೊಮೋನನ ವಂಶದಲ್ಲಿ ಜನಿಸಿದವರ ಹೆಸರುಗಳು ಇಂತಿವೆ: ಸೊಲೊಮೋನ, ರೆಹಬ್ಬಾಮ, ಅಬೀಯ, ಆಸ, ಯೆಹೋಷಾಫಾಟ್,


ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಆಸನು ತನ್ನ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.


ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;


ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು