Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:10 - ಕನ್ನಡ ಸತ್ಯವೇದವು C.L. Bible (BSI)

10 ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:10
14 ತಿಳಿವುಗಳ ಹೋಲಿಕೆ  

ತರುವಾಯ ಯೆಹೂದಕುಲದವರು ತಮ್ಮ ಬಂಧುಗಳಾದ ಸಿಮೆಯೋನ್ ಕುಲದವರ ಸಂಗಡ ಹೋಗಿ ‘ಚೆಫತ್’ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ‘ಹೋರ್ಮಾ’ ಎಂದು ಕರೆದರು.


ಎಚೆಮ್, ಎಲ್ತೋಲದ್, ಬೆತೂಲ್,


ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.


ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.


ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II


ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II


ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು