Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:14 - ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ಯೆಹೋವನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಿಂದ ಅವರಿಗೆ ದೊಡ್ಡ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ಅವರು ಯೆಹೋವನ ಭಯಕ್ಕೆ ಒಳಗಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ವಶಮಾಡಿಕೊಂಡು ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲಿ ದೊಡ್ಡ ಕೊಳ್ಳೆ ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:14
20 ತಿಳಿವುಗಳ ಹೋಲಿಕೆ  

ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.


ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.


ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ದನಕಾಯುವವರ ಗುಡಾರಗಳ ಮೇಲೆ ದಾಳಿಮಾಡಿ ಎಷ್ಟೋ ಒಂಟೆಕುರಿಗಳನ್ನು ಜೆರುಸಲೇಮಿಗೆ ಹೊಡೆದುಕೊಂಡು ಬಂದರು.


ಆಸನ ಉಳಿದ ಚರಿತ್ರೆ, ಅವನ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಹಾಗು ಅವನ ಇತರ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗ ತಗಲಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು