Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:4 - ಕನ್ನಡ ಸತ್ಯವೇದವು C.L. Bible (BSI)

4 ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:4
21 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ.


ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.


ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.


ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.


ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿಸಿದನು. ಕಲ್ಲುಕಂಬಗಳನ್ನು ಒಡೆದು ಹಾಕಿಸಿದನು. ಅಶೇರ ವಿಗ್ರಹಸ್ತಂಭಗಳನ್ನು ಕೆಡವಿಬಿಟ್ಟನು.


ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು