Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:13 - ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತಮ್ಮಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲುವೆವೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯಾವನಾದರೂ ದೇವರಾದ ಯೆಹೋವನ ಸೇವೆಮಾಡಲು ನಿರಾಕರಿಸುವದಾದರೆ ಆ ವ್ಯಕ್ತಿಯು ಗಂಡಸಾಗಿದ್ದರೂ ಹೆಂಗಸಾಗಿದ್ದರೂ ಮುಖ್ಯವಾದವನಾಗಿದ್ದರೂ ಮುಖ್ಯವಲ್ಲದವನಾಗಿದ್ದರೂ ಕೊಲ್ಲಲ್ಪಡಬೇಕು ಎಂಬುದಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:13
16 ತಿಳಿವುಗಳ ಹೋಲಿಕೆ  

“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.


ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಚಿಕ್ಕವರು ದೊಡ್ಡವರು ಎಂಬ ತಾರತಮ್ಯ ಅಲ್ಲಿಲ್ಲ ಗುಲಾಮ ಯಜಮಾನನೆಂಬ ನಿಯಮವೂ ಇಲ್ಲ.


ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.


“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು