Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:9 - ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವದನ್ನು ನೋಡಿ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದದೇಶದಲ್ಲಿ ಇಳಕೊಂಡಿದ್ದ ಎಫ್ರಾಯೀಮ್ ಮನಸ್ಸೆ ಸಿಮೆಯೋನ್ ಕುಲಗಳವರನ್ನೂ ಕರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಆಸನು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದ ಜನರನ್ನೆಲ್ಲಾ ಒಟ್ಟಾಗಿ ಸೇರಿಸಿದನು. ಅದೇ ಪ್ರಕಾರ ಅವನು ಇಸ್ರೇಲನ್ನು ಬಿಟ್ಟು ಯೆಹೂದದಲ್ಲಿ ನೆಲೆಸಲು ಬಂದಿದ್ದ ಎಫ್ರಾಯೀಮ್, ಮನಸ್ಸೆ ಮತ್ತು ಸಿಮೆಯೋನ್ ಪ್ರಾಂತ್ಯಗಳವರನ್ನೂ ಒಟ್ಟಾಗಿ ಸೇರಿಸಿದನು. ದೇವರಾದ ಯೆಹೋವನು ಆಸನ ಕೂಡ ಇರುವದನ್ನು ನೋಡಿ ಅವನೊಂದಿಗೆ ಸೇರಲು ಅನೇಕ ಜನರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:9
15 ತಿಳಿವುಗಳ ಹೋಲಿಕೆ  

ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.


ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.


ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು.


ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.


ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಜೆರುಸಲೇಮಿನಲ್ಲಿ ಕೂಡಿಬಂದರು.


“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;


ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.


ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು