Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:1 - ಕನ್ನಡ ಸತ್ಯವೇದವು C.L. Bible (BSI)

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಯೇಲ್ ರಾಜ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿಬರುವುದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲರ ರಾಜನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ, ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಕೋಟೆಯನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಸನ ಆಳಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರಾಯೇಲ್‍ರಾಜನಾದ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಬಂದು ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲಿ ಬರುವುದಕ್ಕಾಗಲಿ ಯಾರಿಗೂ ಆಗದಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:1
9 ತಿಳಿವುಗಳ ಹೋಲಿಕೆ  

ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.


ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.


ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.


ಅವನ ಆಳ್ವಿಕೆಯ ಮೂವತ್ತ ಐದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.


ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,


“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು