Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:12 - ಕನ್ನಡ ಸತ್ಯವೇದವು C.L. Bible (BSI)

12 ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಆಳಿಕೆಯ ಮೂವತ್ತೊಂಭತ್ತನೆಯ ವರುಷದಲ್ಲಿ ಅವನ ಕಾಲುಗಳಿಗೆ ಬಹುಕಠಿಣವಾದ ರೋಗವುಂಟಾಯಿತು. ಈ ರೋಗದಲ್ಲಿಯೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:12
15 ತಿಳಿವುಗಳ ಹೋಲಿಕೆ  

ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆದುದರಿಂದ ಸರ್ವೇಶ್ವರ ಅವನನ್ನು ಕೊಲ್ಲಿಸಿ ಜೆಸ್ಸೆಯ ಮಗ ದಾವೀದನಿಗೆ ರಾಜ್ಯವನ್ನೊಪ್ಪಿಸಿದರು.


ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.


ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ನಮ್ಮ ಪ್ರಿಯ ವೈದ್ಯನಾದ ಲೂಕನೂ ದೇಮಾಸನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು.


ಅವನು ತನ್ನ ಆಳ್ವಿಕೆಯ ನಲವತ್ತ ಒಂದನೆಯ ವರ್ಷದಲ್ಲಿ ತೀರಿಕೊಂಡು ಪಿತೃಗಳ ಬಳಿಗೆ ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು