Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:14 - ಕನ್ನಡ ಸತ್ಯವೇದವು C.L. Bible (BSI)

14 ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಇವರ ಗೋತ್ರಪ್ರಧಾನರು ಯಾರಂದರೆ - ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ರಣವೀರರ ಅಧಿಪತಿಯಾದ ಅದ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:14
11 ತಿಳಿವುಗಳ ಹೋಲಿಕೆ  

ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.


ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.


“ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಜುದೇಯದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಯಿತ್ತು. ಜೆರುಸಲೇಮಿನಲ್ಲಿ ರಣವೀರರಾದ ಯೋಧರು ಇದ್ದರು:


ಯೆಹೋಹಾನಾನ್ - ಇವನು ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ರಣವೀರರ ಅಧಿಪತಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು