Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:7 - ಕನ್ನಡ ಸತ್ಯವೇದವು C.L. Bible (BSI)

7 ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಸರದಾರರಾದ ಬೆನ್ಹೈಲ್, ಓಬದ್ಯ, ಜೆಕರ್ಯ, ನೆತನೇಲ್, ಮೀಕಾಯ ಇವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇವನು ತನ್ನ ಆಳಿಕೆಯ ಮೂರನೆಯ ವರುಷದಲ್ಲಿ ತನ್ನ ಸರದಾರರಾದ ಬೆನ್ಹೈಲ್, ಓಬದ್ಯ, ಜೆಕರ್ಯ, ನೆತನೇಲ್, ಮೀಕಾಯ ಇವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:7
20 ತಿಳಿವುಗಳ ಹೋಲಿಕೆ  

ಎಲ್ಲ ಇಸ್ರಯೇಲರಿಗೆ ಉಪದೇಶಿಸತಕ್ಕವರೂ ಸರ್ವೇಶ್ವರನಿಗೆ ಪ್ರತಿಷ್ಠರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಯೇಲ್ ಅರಸನೂ ಆದ ಸೊಲೊಮೋನನು ಕಟ್ಟಿಸಿದ ಮಹಾದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿ; ಅದನ್ನು ಹೆಗಲ ಮೇಲೆ ಹೊತ್ತುಕೊಳ್ಳುವುದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಸರ್ವೇಶ್ವರನಿಗೂ ಅವರ ಪ್ರಜೆಗಳಾದ ಇಸ್ರಯೇಲರಿಗೂ ಸೇವೆಸಲ್ಲಿಸಿರಿ.


ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.


ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.


ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು:


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.


ಉಪದೇಶಕನಾದ ನಾನು ಜೆರುಸಲೇಮಿನಲ್ಲಿ ಇಸ್ರಯೇಲರಿಗೆ ಅರಸನಾಗಿದ್ದೆ.


ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳದಲ್ಲೇ ನಿಂತು, ತಮ್ಮ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಸರ್ವೇಶ್ವರನಿಗೆ ಅಡ್ಡಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಇಸ್ಸಾಕಾರ್ ಕುಲದಿಂದ ಚೂವಾರನ ಮಗ ನೆತನೇಲ್


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು