Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:2 - ಕನ್ನಡ ಸತ್ಯವೇದವು C.L. Bible (BSI)

2 ಆಹಾಬನು ಅವನಿಗೂ ಅವನೊಡನೆ ಬಂದ ಜನರಿಗೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣವನ್ನೇರ್ಪಡಿಸಿದನು. ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಲು ತನ್ನ ಸಂಗಡ ಬರಬೇಕೆಂದು ಅವನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕೆಲವು ವರುಷಗಳಾದನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದಾಗ ಅಹಾಬನು ಅವನಿಗೋಸ್ಕರವೂ ಅವನೊಡನೆ ಬಂದ ಜನರಿಗೋಸ್ಕರವೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿ ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್‍ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವು ವರ್ಷಗಳ ನಂತರ ಯೆಹೋಷಾಫಾಟನು ಸಮಾರ್ಯ ಪಟ್ಟಣದಲ್ಲಿ ಅಹಾಬನನ್ನು ಸಂಧಿಸಲು ಹೋದನು. ಯೆಹೋಷಾಫಾಟನಿಗೂ ಅವನೊಂದಿಗೆ ಬಂದಿದ್ದ ಜನರಿಗೂ ಅಹಾಬನು ಅನೇಕ ದನಕುರಿಗಳನ್ನು ವಧಿಸಿ ಔತಣಮಾಡಿಸಿದನು. ರಾಮೋತ್‌ಗಿಲ್ಯೋದ್ ಪಟ್ಟಣದ ಮೇಲೆ ಯುದ್ಧಮಾಡಲು ಅಹಾಬನು ಯೆಹೋಷಾಫಾಟನನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:2
12 ತಿಳಿವುಗಳ ಹೋಲಿಕೆ  

ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಒಮ್ಮೆ ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಬಲಿದಾನ ಮಾಡಿಸಿದನು; ಅರಸುಕುಮಾರರಾದ ತನ್ನ ಸಹೋದರರನ್ನು ಹಾಗು ಆಸ್ಥಾನದ ಎಲ್ಲ ಯೆಹೂದ್ಯ ಅಧಿಕಾರಿಗಳನ್ನು ಔತಣಕ್ಕೆ ಆಮಂತ್ರಿಸಿದನು.


ನಾನು ಬಾಬಿಲೋನಿನ ಅರಸ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ಅರಸನ ಬಳಿಗೆ ಹೋಗಿದ್ದೆ. ಆದುದರಿಂದ ಇದೆಲ್ಲಾ ನಡೆಯುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ಕ್ರಮೇಣ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು


ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.


ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು.


ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು