Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು - ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ ಎಂದು ಕೇಳಲು ಅವನು - ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೇಯಲ್ಲವೋ. ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ನನ್ನೊಂದಿಗೆ ರಾಮೋತ್‌ಗಿಲ್ಯಾದಿಗೆ ಯುದ್ಧಮಾಡಲು ಬರುವಿಯಾ?” ಎಂದು ಕೇಳಲು, ಯೆಹೋಷಾಫಾಟನು, “ನಾನು ನಿನ್ನವನೆ, ನನ್ನ ಜನರು ನಿನ್ನ ಜನರೇ ಆಗಿದ್ದಾರೆ. ನಾವು ಯುದ್ಧಮಾಡಲು ನಿಮ್ಮೊಂದಿಗೆ ಬರುತ್ತೇವೆ” ಎಂದು ಅಹಾಬನಿಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:3
9 ತಿಳಿವುಗಳ ಹೋಲಿಕೆ  

ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.


ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.


ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.


ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಆಹಾಬನು ಅವನಿಗೂ ಅವನೊಡನೆ ಬಂದ ಜನರಿಗೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣವನ್ನೇರ್ಪಡಿಸಿದನು. ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಲು ತನ್ನ ಸಂಗಡ ಬರಬೇಕೆಂದು ಅವನನ್ನು ಪ್ರೇರಿಸಿದನು.


ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು