Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:30 - ಕನ್ನಡ ಸತ್ಯವೇದವು C.L. Bible (BSI)

30 ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ", ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ - ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲ್ಯರ ಅರಸನಿಗೇ ಗುರಿಯಿಡಿರಿ ಎಂದು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:30
8 ತಿಳಿವುಗಳ ಹೋಲಿಕೆ  

ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,


ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.


ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.


ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು