Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:4 - ಕನ್ನಡ ಸತ್ಯವೇದವು C.L. Bible (BSI)

4 ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನಂತರ ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು ಎಂದು ಇಸ್ರಾಯೇಲ್ಯರ ಅರಸನನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಷಾಫಾಟನು ಅಹಾಬನಿಗೆ, “ಆದರೆ ಮೊದಲು ನಾವು ಯೆಹೋವನನ್ನು ವಿಚಾರಿಸೋಣ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:4
13 ತಿಳಿವುಗಳ ಹೋಲಿಕೆ  

ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.


ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.


ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.


ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ;


“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?", ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು