Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:7 - ಕನ್ನಡ ಸತ್ಯವೇದವು C.L. Bible (BSI)

7 “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು - ಅರಸನು ಹಾಗೆ ಹೇಳಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:7
30 ತಿಳಿವುಗಳ ಹೋಲಿಕೆ  

ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.


ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.


ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.


ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II


ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II


ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.


(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು,


ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು