Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:3 - ಕನ್ನಡ ಸತ್ಯವೇದವು C.L. Bible (BSI)

3 ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನಿನ್ನಲ್ಲಿ ಕೆಲವಾರು ಒಳ್ಳೆಯ ವಿಷಯಗಳಿವೆ. ನೀನು ಈ ದೇಶದೊಳಗಿದ್ದ ಅಶೇರಕಂಬಗಳನ್ನು ತೆಗೆದುಹಾಕಿಸಿದೆ; ಯೆಹೋವನನ್ನು ಹಿಂಬಾಲಿಸಲು ನಿನ್ನ ಹೃದಯದಲ್ಲಿ ತೀರ್ಮಾನಿಸಿದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:3
16 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.


ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.


ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.


ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.


ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ಯೋತಾಮನು ತನ್ನ ದೇವರಾದ ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಂಡಿದ್ದರಿಂದ ಶಕ್ತಿಶಾಲಿ ಆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು