Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:8 - ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ, ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಲೇವಿಯರಿಂದಲೂ, ಯಾಜಕರಿಂದಲೂ, ಇಸ್ರಾಯೇಲ್ ಗೋತ್ರ ಪ್ರಧಾನರಿಂದಲೂ, ಕೆಲವರನ್ನು ಆರಿಸಿ ಯೆಹೋವನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ, ಕಲಹಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವುದಕ್ಕಾಗಿ ಅವರನ್ನು ಯೆರೂಸಲೇಮಿನಲ್ಲೇ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇವಿುಗೆ ಹಿಂದಿರುಗಿ ಬಂದು ಲೇವಿಯರಿಂದಲೂ ಯಾಜಕರಿಂದಲೂ ಇಸ್ರಾಯೇಲ್‍ಗೋತ್ರ ಪ್ರಧಾನರಿಂದಲೂ ಕೆಲವರನ್ನು ಆರಿಸಿ ಯೆಹೋವ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವದಕ್ಕೋಸ್ಕರ ಯೆರೂಸಲೇವಿುನಲ್ಲಿ ಇರಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:8
11 ತಿಳಿವುಗಳ ಹೋಲಿಕೆ  

ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಯೇಲರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.


ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


“ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.


ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.


ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II


ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು