Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:3 - ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:3
18 ತಿಳಿವುಗಳ ಹೋಲಿಕೆ  

ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.


ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.


ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.


ಅವುಗಳಲ್ಲಿ ಒಂದನ್ನು ಬೆಳಿಗ್ಗೆ ಮತ್ತೊಂದನ್ನು ಸಂಜೆ ಸಮರ್ಪಿಸಬೇಕು.


ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು.


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.


“ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:


‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ


‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,


ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.


“ಅರಸ ಸೈರಸನ ಮೊದಲನೆಯ ವರ್ಷದಲ್ಲಿ, ಅರಸ ಸೈರಸನು ಜೆರುಸಲೇಮಿನ ದೇವಾಲಯದ ಬಗ್ಗೆ ಕೊಟ್ಟ ಅಪ್ಪಣೆ ಇದು: ಬಲವಾದ ಅಸ್ತಿವಾರವನ್ನು ಹಾಕಿ, ಬಲಿಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಇಪ್ಪತ್ತೇಳು ಮೀಟರ್, ಅಗಲ ಇಪ್ಪತ್ತೇಳು ಮೀಟರ್ ಇರಬೇಕು.


ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು