Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:19 - ಕನ್ನಡ ಸತ್ಯವೇದವು C.L. Bible (BSI)

19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು ಇಸ್ರಾಯೇಲ್‍ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕೆಹಾತ್ಯನ ಕುಲದವರಾದ ಲೇವಿಯರೂ ಕೋರಹನ ವಂಶದವರೂ ಎದ್ದುನಿಂತು ಇಸ್ರೇಲ್ ದೇವರಾದ ಯೆಹೋವನಿಗೆ ಗಟ್ಟಿಯಾದ ಸ್ವರದಿಂದ ಸ್ತುತಿಗೀತೆ ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:19
16 ತಿಳಿವುಗಳ ಹೋಲಿಕೆ  

ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.


ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.


ಅವರಲ್ಲಿ ಆಸಾಫನು ಮುಖ್ಯಸ್ಥನಾಗಿಯೂ ಜೆಕರ್ಯ ಅವನ ಸಹಾಯಕನಾಗಿಯೂ ನೇಮಕಗೊಂಡರು. ಯೇಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಹಾಗು ಯೆಗೀಯೇಲ್ ಸ್ವರಮಂಡಲಗಳನ್ನು ಬಾರಿಸಲು ನೇಮಕವಾದರು. ಆಸಾಫನು ತಾಳಗಳನ್ನು ಬಾರಿಸಬೇಕಾಗಿತ್ತು.


ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II


ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಕೋರಹನ ಮಕ್ಕಳು - ಅಸ್ಸೀರ್, ಎಲ್ಕಾನಾ ಮತ್ತು ಅಬಿಯಾಸಾಫ್. ಇವರೇ ಕೋರಹೀಯರ ಗೋತ್ರಸ್ಥಾಪಕರು.


ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಟಲುಗಳ ಮೇಲೆ ನಿಂತು, ಸ್ವರವೆತ್ತಿ ತಮ್ಮ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು