Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:22 - ಕನ್ನಡ ಸತ್ಯವೇದವು C.L. Bible (BSI)

22 ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:22
15 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”


ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಿದರು. ಯೆಹೋಶುವ ಜನರಿಗೆ, “ಆರ್ಭಟಿಸಿರಿ, ಸರ್ವೇಶ್ವರಸ್ವಾಮಿ ನಿಮಗೆ ಈ ನಗರವನ್ನು ಕೊಟ್ಟಿದ್ದಾರೆ.


ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.


ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು