Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:11 - ಕನ್ನಡ ಸತ್ಯವೇದವು C.L. Bible (BSI)

11 ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ಅವನು ಯೆಹೂದದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಯೆರೂಸಲೇವಿುನವರನ್ನು ದೇವದ್ರೋಹಮಾಡುವಂತೆ ಪ್ರೇರಿಸಿ ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:11
28 ತಿಳಿವುಗಳ ಹೋಲಿಕೆ  

ನಾನು ಆ ವ್ಯಕ್ತಿಗೂ ಅವನ ಕುಟುಂಬದವರಿಗೂ ವಿಮುಖನಾಗುವೆನು; ಅವನನ್ನು ಮಾತ್ರವಲ್ಲ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕ ದೇವತೆಗೆ ಶರಣಾದವರೆಲ್ಲರನ್ನು ತಮ್ಮ ಜನದಿಂದ ತೆಗೆದುಹಾಕುವೆನು.


ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.


ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II


ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II


ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;


“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”


ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.


“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು.


“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.


“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು