Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:15 - ಕನ್ನಡ ಸತ್ಯವೇದವು C.L. Bible (BSI)

15 ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನಗಾದರೋ ಕರುಳು ಬೇನೆಯ ಕಠಿಣ ರೋಗ ಬರುವುದು. ಅದು ಬಹು ದಿನಗಳವರೆಗೂ ಇದ್ದು ವಾಸಿಯಾಗದೇ ನಿನ್ನ ಕರುಳುಗಳು ಹೊರಗೆ ಬೀಳುವುವು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನಗಾದರೋ ಕರುಳುಬೇನೆಯೆಂಬ ಕಠಿನರೋಗವು ಬಂದು ಬಹುದಿನಗಳವರೆಗೂ ಇದ್ದು ಕಡೆಯಲ್ಲಿ ಅದರಿಂದ ನಿನ್ನ ಕರುಳುಗಳು ಹೊರಗೆ ಬೀಳುವವು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿನ್ನ ಹೊಟ್ಟೆಯೊಳಗೆ ಭಯಂಕರವಾದ ಕಾಯಿಲೆ ಬರುವದು. ಅದು ದಿನದಿಂದ ದಿನಕ್ಕೆ ಹೆಚ್ಚುವುದು. ಆ ರೋಗದ ನಿಮಿತ್ತ ನಿನ್ನ ಕರುಳು ನಿನ್ನ ಹೊಟ್ಟೆಯಿಂದ ಹೊರಬೀಳುವದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:15
11 ತಿಳಿವುಗಳ ಹೋಲಿಕೆ  

("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.


ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II


ಮನಸ್ಸಿನಲ್ಲಿ ನಿರಂತರ ಪ್ರಾಣಭಯವಿರುವುದರಿಂದ ಹಾಗು ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದ ನೀವು ಹೊತ್ತಾರೆಯಲ್ಲೇ, ‘ಅಯ್ಯೋ, ಅಯ್ಯೋ, ಸಾಯಂಕಾಲ ಯಾವಾಗ ಬರುವುದೋ?’ ಎಂದೂ ಸಾಯಂಕಾಲದಲ್ಲಿ, ‘ಅಯ್ಯೋ, ಅಯ್ಯೋ, ಮರುದಿನ ಯಾವಾಗ ಬರುವುದೋ?’ ಎಂದೂ ಕೊರಗುವಿರಿ.


ಇಷ್ಟುಮಾತ್ರವಲ್ಲದೆ, ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವರು.


ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.


ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.


ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು