Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:2 - ಕನ್ನಡ ಸತ್ಯವೇದವು C.L. Bible (BSI)

2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರು ಯೆಹೂದ್ಯರ ಅರಸ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮಿಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಇಸ್ರಾಯೇಲರ ಅರಸನಾದ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋರಾಮನ ತಮ್ಮಂದಿರು ಯಾರೆಂದರೆ: ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್ ಮತ್ತು ಶೆಫಟ್ಯ. ಇವರೆಲ್ಲಾ ಯೆಹೂದದ ರಾಜನಾಗಿದ್ದ ಯೆಹೋಷಾಫಾಟನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:2
10 ತಿಳಿವುಗಳ ಹೋಲಿಕೆ  

ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ, “ನೀವು ಜುದೇಯದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಸರ್ವೇಶ್ವರನ ಆಲಯದ ವಾರ್ಷಿಕ ದುರಸ್ತಿಯ ಖರ್ಚಿಗಾಗಿ ಎಲ್ಲ ಇಸ್ರಯೇಲರಿಂದ ಹಣ ಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ,” ಎಂದು ಆಜ್ಞಾಪಿಸಿದನು.


ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.


ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು.


ಇಂಥಾ ಪಾಸ್ಕಹಬ್ಬ ಪ್ರವಾದಿ ಸಮುವೇಲನ ದಿವಸಗಳಿಂದ ಇಸ್ರಯೇಲರಲ್ಲಿ ನಡೆದಿರಲಿಲ್ಲ. ಯೋಷೀಯನು, ಯಾಜಕರು, ಲೇವಿಯರು, ಕೂಡಿಬಂದಿದ್ದ ಇಸ್ರಯೇಲರು, ಯೆಹೂದ್ಯರು, ಹಾಗು ಜೆರುಸಲೇಮಿನವರು ಈ ಪಾಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಯೇಲ್ ಅರಸರಲ್ಲಿ ಒಬ್ಬನೂ ಆಚರಿಸಿರಲಿಲ್ಲ.


ಮನಸ್ಸೆಯ ಉಳಿದ ಚರಿತ್ರೆ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆ, ಹಾಗು ದರ್ಶಿಗಳು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳು, ಇವು ಇಸ್ರಯೇಲ್ ರಾಜರ ಇತಿಹಾಸದಲ್ಲಿ ದಾಖಲಾಗಿ ಇವೆ.


ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.


ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.


ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.


ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು