Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:1 - ಕನ್ನಡ ಸತ್ಯವೇದವು C.L. Bible (BSI)

1 ಜೆರುಸಲೇಮಿನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯಮಗ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರೇಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಜುದೇಯದ ಅರಸ ಯೆಹೋರಾಮನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆರೂಸಲೇಮಿನವರು ಯೆಹೋರಾಮನ ಮರಣದ ನಂತರ, ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆರೂಸಲೇವಿುನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯ ಮಗನಾದ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರಬಿಯರೊಡನೆ [ಯೆಹೋರಾಮನ] ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದದರಿಂದ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜೆರುಸಲೇಮಿನ ಜನರು ಯೆಹೋರಾಮನ ಕೊನೆಯ ಮಗನಾದ ಅಹಜ್ಯನನ್ನು ತಮ್ಮ ರಾಜನನ್ನಾಗಿ ಆರಿಸಿಕೊಂಡರು. ಯೆಹೋರಾಮನೊಂದಿಗೆ ಯುದ್ಧಕ್ಕೆ ಬಂದಿದ್ದ ಅರಬ್ಬಿಯರು ಅವನ ಮಕ್ಕಳನ್ನೆಲ್ಲಾ ಕೊಂದಿದ್ದರು. ಹೀಗಾಗಿ ಉಳಿದುಕೊಂಡಿದ್ದ ಅಹಜ್ಯನು ಜೆರುಸಲೇಮಿನಲ್ಲಿ ಯೆಹೂದ ರಾಜ್ಯವನ್ನು ಆಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:1
12 ತಿಳಿವುಗಳ ಹೋಲಿಕೆ  

ನಾಡಿನ ಜನರು ಯೋಷೀಯನ ಮಗ ಯೆಹೋವಾಹಾಜನನ್ನು ಅವನ ತಂದೆಗೆ ಬದಲಾಗಿ, ಜೆರುಸಲೇಮಿನಲ್ಲಿ ಅರಸನನ್ನಾಗಿ ಮಾಡಿದರು.


ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.


ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.


ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷ ಪ್ರಾಯ. ಇವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು; ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ;


ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.


ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.


ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.


ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು