Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 22:11 - ಕನ್ನಡ ಸತ್ಯವೇದವು C.L. Bible (BSI)

11 ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆ, ಹತರಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ ಅಹಜ್ಯನ ಮಗ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು, ಹತರಾಗುತ್ತಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ, ಅಹಜ್ಯನ ಸಹೋದರಿಯೂ, ಯಾಜಕನಾದ ಯೆಹೋಯಾದನ ಹೆಂಡತಿಯೂ, ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆಯು ಹತರಾಗುವದಕ್ಕಿದ್ದ ರಾಜಪುತ್ರರ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷನನ್ನು ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕನಾದ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಅರಸನಾದ ಯೋರಾಮನ ಮಗಳಾದ ಯೆಹೋಷಬತಳು ಅಹಜ್ಯನ ಮಗನಾದ ಯೆಹೋವಾಷನನ್ನು ಅಡಗಿಸಿಟ್ಟಳು. ಆಕೆಯು ಅವನನ್ನೂ ಅವನ ದಾದಿಯನ್ನೂ ಒಳಗಿನ ಕೋಣೆಯಲ್ಲಿ ಅಡಗಿಸಿಟ್ಟಳು. ಆಕೆಯು ಯಾಜಕನಾದ ಯೆಹೋಯಾದನ ಹೆಂಡತಿಯಾಗಿದ್ದಳು. ಆಕೆಯು ಸಹ ಅಹಜ್ಯನ ಸೋದರಿ. ಯೆಹೋವಾಷನು ಅತಲ್ಯಳಿಗೆ ಸಿಗದೆಹೋದುದರಿಂದ ಬದುಕಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 22:11
14 ತಿಳಿವುಗಳ ಹೋಲಿಕೆ  

ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.


ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.


ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದ ಕೂಡಲೆ ಜುದೇಯರ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು