Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:1 - ಕನ್ನಡ ಸತ್ಯವೇದವು C.L. Bible (BSI)

1 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಪ್ಪಂದ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳನೆಯ ವರುಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ, ಜಿಕ್ರಿಯ ಮಗನಾದ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಡಂಬಡಿಕೆಯನ್ನು ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆರು ವರ್ಷದ ನಂತರ ಯೆಹೋಯಾದನು ತನ್ನ ಬಲವನ್ನು ಪ್ರದರ್ಶಿಸಿದನು. ಅವನು ಸೇನಾಪತಿಗಳೊಂದಿಗೆ ಒಪ್ಪಂದ ಮಾಡಿಕೊಂಡನು. ಅವರು ಯಾರೆಂದರೆ: ಯೆರೋಹಾಮನ ಮಗನಾದ ಅಜರ್ಯ, ಯೆಹೋಹಾನಾನನ ಮಗನಾದ ಇಷ್ಮಾಯೇಲ್, ಓಬೇದನ ಮಗನಾದ ಅಜರ್ಯ, ಅದಾಯನ ಮಗನಾದ ಮಾಸೇಯ ಮತ್ತು ಜಿಕ್ರಿಯ ಮಗನಾದ ಎಲೀಷಾಫಾಟ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:1
7 ತಿಳಿವುಗಳ ಹೋಲಿಕೆ  

ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.


ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.


ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.


ಇಚ್ಹಾರನ ಮಕ್ಕಳು - ಕೋರಹ, ನೆಫೆಗೆ ಮತ್ತು ಜಿಕ್ರೀ.


ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.


ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು