Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:15 - ಕನ್ನಡ ಸತ್ಯವೇದವು C.L. Bible (BSI)

15 ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಆಕೆಯನ್ನು ಹಿಡಿದು ಅರಸನ ಅರಮನೆಗೆ ಹೋಗುವ ಕುದುರೆ ಬಾಗಿಲಿನ ತನಕ ಒಯ್ದು, ಅವಳನ್ನು ಕೊಂದು ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಲಿನ ತನಕ ಒಯ್ದು ಅಲ್ಲಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅರಮನೆಗೆ ಹೋಗುವ ದಾರಿಯಲ್ಲಿ ಕುದುರೆ ಬಾಗಿಲಿನ ಹತ್ತಿರ ಸಿಪಾಯಿಗಳು ಆಕೆಯನ್ನು ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:15
12 ತಿಳಿವುಗಳ ಹೋಲಿಕೆ  

ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.


ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದ ಕೂಡಲೆ ಜುದೇಯರ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು