Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:4 - ಕನ್ನಡ ಸತ್ಯವೇದವು C.L. Bible (BSI)

4 ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈಗ ನೀವು ಮಾಡತಕ್ಕದ್ದು ಏನೆಂದರೆ: ಸಬ್ಬತ್ ದಿನದಂದು ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ, ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈಗ ನೀವು ಮಾಡಬೇಕಾದದ್ದೇನೆಂದರೆ: ಸಬ್ಬತ್ ದಿವಸದಲ್ಲಿ ದೇವಾಲಯಕ್ಕೆ ಬರತಕ್ಕ ಯಾಜಕರಲ್ಲೂ ಲೇವಿಯರಲ್ಲೂ ಮೂರರಲ್ಲೊಂದು ಭಾಗವು ದೇವಾಲಯದ ದ್ವಾರಗಳನ್ನು ಕಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:4
8 ತಿಳಿವುಗಳ ಹೋಲಿಕೆ  

ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್‍ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು