Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:24 - ಕನ್ನಡ ಸತ್ಯವೇದವು C.L. Bible (BSI)

24 ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಾಮ್ಯ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಕಡೆಗಣಿಸಿದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಯೆಹೋವನು ಅರಾಮ್ಯರ ಕೈಯಲ್ಲಿ ಸೋಲುವಂತೆ ಮಾಡಿ, ಯೆಹೋವಾಷನನ್ನು ಅವರ ಮುಖಾಂತರ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಾಮ್ಯರ ಸೈನ್ಯದಿಂದ ಬಂದು ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟುಬಿಟ್ಟದ್ದರಿಂದ ಮಹಾಸೈನ್ಯವಾಗಿದ್ದ ಅವರನ್ನು ಆತನು ಅರಾಮ್ಯರ ಕೈಯಲ್ಲಿ ಬೀಳುವಂತೆ ಮಾಡಿ ಯೆಹೋವಾಷನನ್ನು ಇವರ ಮುಖಾಂತರ ಶಿಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅರಾಮ್ಯರ ಸೈನ್ಯವು ಸ್ವಲ್ಪ ಮಂದಿಯಿಂದ ಕೂಡಿದ್ದರೂ ಯೆಹೂದದ ದೊಡ್ಡ ಸೈನ್ಯವನ್ನು ಸೋಲಿಸಿಬಿಟ್ಟಿತು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದುದರಿಂದ ದೇವರಾದ ಯೆಹೋವನು ಹಾಗೆ ಮಾಡಿದನು. ಈ ರೀತಿಯಾಗಿ ಯೆಹೋವಾಷನು ಶಿಕ್ಷಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:24
19 ತಿಳಿವುಗಳ ಹೋಲಿಕೆ  

ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.


ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು;


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.


ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.


ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.


ಸರ್ವೇಶ್ವರ ಇಂತೆಂದರು - “ನಾನು ಭೂಮಂಡಲದ ಮೇಲೆ ಏನೂ ಇಲ್ಲದಂತೆ ಸಮಸ್ತವನ್ನು ಅಳಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು