Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:7 - ಕನ್ನಡ ಸತ್ಯವೇದವು C.L. Bible (BSI)

7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳನಿಗಾಗಿ ಕೊಟ್ಟು ಬಿಟ್ಟಿದ್ದಾರಲ್ಲಾ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅತಿ ದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ ಯೆಹೋವನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗೋಸ್ಕರ ಕೊಟ್ಟುಬಿಟ್ಟರಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಗತಿಸಿದ ವರ್ಷಗಳಲ್ಲಿ ಅತಲ್ಯಳ ಮಕ್ಕಳು ದೇವಾಲಯದೊಳಗೆ ಬಲಾತ್ಕಾರದಿಂದ ನುಗ್ಗಿ ಅಲ್ಲಿದ್ದ ಪವಿತ್ರ ವಸ್ತುಗಳನ್ನು ತೆಗೆದು ಬಾಳ್ ದೇವರ ಪೂಜೆಗಾಗಿ ಉಪಯೋಗಿಸಿದ್ದರು. ಅತಲ್ಯಳು ಬಹಳ ದುಷ್ಟಳಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:7
18 ತಿಳಿವುಗಳ ಹೋಲಿಕೆ  

ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.


ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.


ಈ ಇಸ್ರಯೇಲರು ಬಾಳ್ ದೇವತೆಯ ಪ್ರತಿಮೆಗಳನ್ನು ಪೂಜಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಕ್ರಮೇಣ ಯೆಹೋವಾಷನು ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕೆ ಮನಸ್ಸುಮಾಡಿದನು.


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು.


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು