Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:9 - ಕನ್ನಡ ಸತ್ಯವೇದವು C.L. Bible (BSI)

9 ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೂದ ಮತ್ತು ಜೆರುಸಲೇಮಿನಲ್ಲಿ ಲೇವಿಯರು ಜನರಿಗೆಲ್ಲಾ ತಮ್ಮ ತಮ್ಮ ತೆರಿಗೆ ಹಣವನ್ನು ತಂದು ದೇವರಿಗೆ ಸಮರ್ಪಿಸುವಂತೆ ಪ್ರಕಟಿಸಿದರು. ಇಸ್ರೇಲರು ಅರಣ್ಯಮಾರ್ಗವಾಗಿ ಪ್ರಯಾಣ ಮಾಡುತ್ತಿರುವಾಗ ದೇವರ ಸೇವಕನಾದ ಮೋಶೆಯು ಜನರಿಗೆ ಇದನ್ನು ಆಜ್ಞಾಪಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:9
5 ತಿಳಿವುಗಳ ಹೋಲಿಕೆ  

ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಎಲ್ಲ ಮುಖ್ಯಸ್ಥರೂ ಜನಸಾಮಾನ್ಯರೂ ಸಂತೋಷದಿಂದ, ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.


ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,


“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು