Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:17 - ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಜುದೇಯದ ಅರಸ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ,” ಎಂದು ದೂತರ ಮುಖಾಂತರ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನಂತರ ಯೆಹೂದದ ಅರಸನಾದ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ, ಯೆಹೋವಾಹಾಜನ ಮಗನೂ, ಇಸ್ರಾಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ” ಎಂದು ದೂತರ ಮುಖಾಂತರವಾಗಿ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅನಂತರ ಯೆಹೂದದ ಅರಸನಾದ ಅಮಚ್ಯನು ಮಂತ್ರಾಲೋಚನೆ ಕೇಳಿ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋವಾಷನಿಗೆ - ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಎಂದು ದೂತರ ಮುಖಾಂತರವಾಗಿ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಮಚ್ಯನು ತನ್ನ ಸಲಹೆಗಾರರೊಂದಿಗೆ ಆಲೋಚನೆ ನಡಿಸಿದನು. ಬಳಿಕ ಇಸ್ರೇಲರ ಅರಸನಾದ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಆದ ಯೋವಾಷನಿಗೆ, “ನಾವು ಮುಖಾಮುಖಿಯಾಗಿ ಸಂಧಿಸೋಣ” ಎಂಬ ಸಂದೇಶವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:17
7 ತಿಳಿವುಗಳ ಹೋಲಿಕೆ  

ಕಲಹಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು; ಕಲಹಕ್ಕೆ ಕೈಹಾಕುವ ಪ್ರತಿಯೊಬ್ಬನು ಮೂರ್ಖನು.


ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು, ಸಮಾರಿಯಾಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಜುದೇಯ ಪಟ್ಟಣಗಳ ಮೇಲೆ ದಾಳಿಮಾಡಿ, ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.


ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು