Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:2 - ಕನ್ನಡ ಸತ್ಯವೇದವು C.L. Bible (BSI)

2 ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ ಯಥಾರ್ಥಚಿತ್ತನಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ಅಮಚ್ಯನು ಮಾಡಿದರೂ ಹೃದಯ ಪೂರ್ವಕವಾಗಿ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:2
12 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ, ಅವುಗಳಿಗೆ ಅಡ್ಡಬಿದ್ದು ಧೂಪಾರತಿ ಎತ್ತುತ್ತಿದ್ದನು.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.


ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.


ಅವನು ತನ್ನ ತಂದೆ ಅಮಚ್ಯನಂತೆ ಸರ್ವೇಶ್ವರನ ಚಿತ್ತಾನುಸಾರವಾಗಿ ನಡೆದನು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II


ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.


ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ, ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು