Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:23 - ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋವಾಷನು ಬೇತ್ಷೆಮೆಷಿನಲ್ಲಿ ಅಮಚ್ಯನನ್ನು ಹಿಡಿದು ಜೆರುಸಲೇಮಿಗೆ ಕೊಂಡೊಯ್ದನು. ಅಮಚ್ಯನ ತಂದೆ ಯೆಹೋವಾಷನು. ಇವನು ಯೆಹೋವಹಾಜನ ಮಗ. ಯೋವಾಷನು ಜೆರುಸಲೇಮಿನ ಪೌಳಿಗೋಡೆಯಲ್ಲಿ ಆರುನೂರು ಅಡಿ ಗೋಡೆಯನ್ನು ಅಂದರೆ ಎಫ್ರಾಯೀಮ್ ಬಾಗಿಲಿನಿಂದ ಹಿಡಿದು ಮೂಲೆಬಾಗಿಲಿನವರೆಗೆ ಗೋಡೆಯನ್ನು ಕೆಡವಿಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:23
18 ತಿಳಿವುಗಳ ಹೋಲಿಕೆ  

ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.


ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.


ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆ ಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗ, ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿ ಭದ್ರಗೊಳಿಸಿದನು.


ಜೆರುಸಲೇಮಿನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯಮಗ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರೇಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಜುದೇಯದ ಅರಸ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.


ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಆ ಗಾಯಗಳನ್ನು ಮಾಯಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡುವುದಕ್ಕೆ ಅಲ್ಲಿಗೆ ಹೋದನು.


ಇಸ್ರಯೇಲರ ಅರಸ ಯೋವಾಷನು, ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮತ್ಯನನ್ನು, ಬೇತ್ಷೆಮೆಷಿನಲ್ಲಿ ಹಿಡಿದು, ಅವನನ್ನು ಜೆರುಸಲೇಮಿಗೆ ಕರೆದುಕೊಂಡುಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.


ಯೆಹೂದ್ಯರು ಇಸ್ರಯೇಲರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು