Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:27 - ಕನ್ನಡ ಸತ್ಯವೇದವು C.L. Bible (BSI)

27 ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಮಚ್ಯನು ಯೆಹೋವನನ್ನು ತ್ಯಜಿಸಿದ್ದರಿಂದ ಯೆರೂಸಲೇಮಿನವರು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡುತ್ತಿದ್ದರು. ಆದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಮಚ್ಯನು ಯೆಹೋವ ಭಕ್ತಿಯನ್ನು ಬಿಟ್ಟಂದಿನಿಂದ ಯೆರೂಸಲೇವಿುನವರು ಅವನಿಗೆ ವಿರೋಧವಾಗಿ ಒಳಸಂಚು ಮಾಡುತ್ತಿದ್ದರು. ಆದದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಮಚ್ಯನು ದೇವರಾದ ಯೆಹೋವನನ್ನು ಆರಾಧಿಸುವದನ್ನು ಬಿಟ್ಟದ್ದಕ್ಕಾಗಿ ಜೆರುಸಲೇಮಿನ ಜನರು ಅವನನ್ನು ಕೊಲ್ಲಲು ಸಂಚುಮಾಡಿದರು. ಆಗ ಅವನು ಲಾಕೀಷಿಗೆ ಓಡಿಹೋದನು. ಆದರೆ ಜನರು ಕೆಲವರನ್ನು ಕಳುಹಿಸಿ ಅಲ್ಲಿಯೇ ಅವನನ್ನು ಕೊಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:27
10 ತಿಳಿವುಗಳ ಹೋಲಿಕೆ  

ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.


ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.


ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.


ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.


ಅವನ ಜನರು ಆ ಶವವನ್ನು ಕುದುರೆಯ ಮೇಲೆ ಜೆರುಸಲೇಮಿಗೆ ತಂದು, ಜುದೇಯದ ರಾಜಧಾನಿಯಲ್ಲಿ, ಅವನ ಪಿತೃ ಸ್ಮಶಾನದಲ್ಲಿ ಸಮಾಧಿಮಾಡಿದರು.


ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ಮಾರೇಷ, ಜೀಫ್, ಅದೋರೈಮ್, ಲಾಕೀಷ್,


ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು