Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:15 - ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವದಕ್ಕಾಗಿ ಜಾಣರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ ಅವುಗಳನ್ನು ಯೆರೂಸಲೇವಿುನಲ್ಲಿ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದನು. ಅವನು ಬಲಿಷ್ಠನಾಗುವವರೆಗೂ ದೇವರ ಆಶ್ಚರ್ಯವಾದ ಸಹಾಯವನ್ನು ಹೊಂದಿದನು; ಅವನ ಕೀರ್ತಿಯು ದೂರದವರೆಗೆ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:15
9 ತಿಳಿವುಗಳ ಹೋಲಿಕೆ  

ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಇವನು ದಾನ್ ಕುಲದ ಒಬ್ಬ ಸ್ತ್ರೀಯ ಮಗ; ಅವನ ತಂದೆ ಟೈರಿನವನು. ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಊದಾ, ನೀಲಿ, ಕೆಂಪುವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸ ಮಾಡುವುದಕ್ಕೂ ತನಗೆ ಒಪ್ಪಿಸಲಾಗುವ ಎಲ್ಲಾ ಕಲಾತ್ಮಕ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನೀನೂ ನಿನ್ನ ತಂದೆ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.


ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ.


ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು;


ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.


ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು