Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:20 - ಕನ್ನಡ ಸತ್ಯವೇದವು C.L. Bible (BSI)

20 ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದಕಾರಣ ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿದದರಿಂದ ಅವನೂ ಶೀಘ್ರವಾಗಿ ಹೊರಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:20
8 ತಿಳಿವುಗಳ ಹೋಲಿಕೆ  

ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.


“ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು;


ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.


“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ


ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ


ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.


ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.


ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು