Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:27 - ಕನ್ನಡ ಸತ್ಯವೇದವು C.L. Bible (BSI)

27 ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಹಾಜನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್ ರಾಜಸ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು, ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಾಯೇಲ್‍ರಾಜಶ್ಮಶಾನದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದೊಳಗಣ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:27
11 ತಿಳಿವುಗಳ ಹೋಲಿಕೆ  

ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.


ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.


ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ :


ಅವನು ಸತ್ತು ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಹಿಜ್ಕೀಯನು ಅರಸನಾದನು.


ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಜುದೇಯ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.


ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರು ಯೆಹೂದ್ಯರ ಅರಸ ಯೆಹೋಷಾಫಾಟನ ಮಕ್ಕಳು.


ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆ ಅವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು