Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:20 - ಕನ್ನಡ ಸತ್ಯವೇದವು C.L. Bible (BSI)

20 ಅರಸ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಸರ್ವೇಶ್ವರನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅರಸನಾದ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಅಧಿಕಾರಿಗಳನ್ನು ಕರೆಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹಿಜ್ಕೀಯ ಅರಸನು ಪಟ್ಟಣದ ಅಧಿಕಾರಿಗಳನ್ನು ಮುಂಜಾನೆ ಕರೆಯಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:20
8 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು.


ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು