Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:21 - ಕನ್ನಡ ಸತ್ಯವೇದವು C.L. Bible (BSI)

21 ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:21
12 ತಿಳಿವುಗಳ ಹೋಲಿಕೆ  

ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.


ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.


ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.


ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.


ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ಅರಸ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಸರ್ವೇಶ್ವರನ ಆಲಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು